ಮೈಸೂರು,ಅ 28 (DaijiworldNews/MS): ಬಸ್ ಪ್ರಯಾಣಿಕರಿಗೆ ಸರ್ಕಾರ ಸಿಹಿಸುದ್ದಿ ಸಿಕ್ಕಿದ್ದು, ಸದ್ಯಕ್ಕೆ ಬಸ್ ಪ್ರಯಾಣದ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನಲೆ ಸಾರಿಗೆ ಇಲಾಖೆ ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ ಮಾಡಲಿದೆ ಎನ್ನಲಾಗಿತ್ತು. ಈ ಬಗ್ಗೆ ಮೈಸೂರಿನಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಶ್ರೀರಾಮುಲು, ಸದ್ಯಕ್ಕೆ ದರ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.
ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಎಲೆಕ್ಟ್ರಿಕ್ ಬಸ್ ಗಳ ಸೇವೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದಿದ್ದಾರೆ.