ಸಾಗರ, ಅ 28 (DaijiworldNews/MS): ಭಾರತ್ ಜೋಡೋ ಪಾದಯಾತ್ರೆಯಿಂದ ವಾಪಸ್ ತೆರಳುವಾಗ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯ ಕಾಂಗ್ರೆಸ್ ಕಾರ್ಯಕರ್ತ ರಮೇಶ್ (55) ಎಂಬುವವರು ಮೃತಪಟ್ಟಿದ್ದರು. ಇವರ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, 10 ಲಕ್ಷ ನೆರವಿನ ಚೆಕ್ ವಿತರಿಸಿ ಸಾಂತ್ವಾನ ಹೇಳಿದರು.
ಮೃತ ಕಾರ್ಯಕರ್ತ ರಮೇಶ್ ನಿಧನದಿಂದಾಗಿ ದುಖದಲ್ಲಿದ್ದಂತ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಅಲ್ಲದೇ ಮೃತ ಕಾಂಗ್ರೆಸ್ ಕಾರ್ಯಕರ್ತ ರಮೇಶ್ ಅವರ ಪತ್ನಿ ಜಯಮ್ಮ ಅವರಿಗೆ 10 ಲಕ್ಷ ರೂಪಾಯಿ ನೆರವಿನ ಚೆಕ್ ನೀಡಿದರು.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ಹಿರಿಯೂರಿನಲ್ಲಿದ್ದಾಗ , ಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಕಾರ್ಯಕರ್ತ ರಮೇಶ್ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸ್ ತೆರಳುವಾಗ ಹಿರಿಯೂರು ನಗರದ ಕೋರ್ಟ್ ಬಳಿ ರಸ್ತೆ ಅಪಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದರು.