ಶಿವಮೊಗ್ಗ, ಅ 28 (DaijiworldNews/HR): ಭಾರತದಲ್ಲಿ ಬದಲಾವಣೆಯ ಅಗತ್ಯವಿದ್ದು, ರಾಹುಲ್ ಗಾಂಧಿಯವರು ಇದೇ ಕಾರಣಕ್ಕೆ ಭಾರತ್ ಜೋಡೊ ಮೂಲಕ ಹೆಜ್ಜೆ ಹಾಕುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಭಾರತ್ ಜೋಡೋ ಪಾದಯಾತ್ರೆ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದ ಸಾಗರದ ಹುತ್ತದಿಂಬ ಗ್ರಾಮದ ರಮೇಶ್ ಮನೆಗೆ ಭೇಟಿ ನೀಡಿ ಮಾತನಾಡಿದ ಅವರು, ದುಃಖದ ಸಮಯದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ಭಾರತ್ ಜೋಡೋ ಯಾತ್ರೆಗೆ ಈ ಭಾಗದ ಬಹುತೇಕ ಮುಖಂಡರು, ಕಾರ್ಯಕರ್ತರು ಬಂದಿದ್ದರು. ರಮೇಶ್ ಪಕ್ಷದ ಬೂತ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ರಾಹುಲ್ ಗಾಂಧಿಯವರ ದೇಶದ ಐಕ್ಯತೆ, ಒಗ್ಗೂಡಿಸುವ ಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದಿದ್ದರು. ಯಾತ್ರೆಯಲ್ಲಿ ಹೆಜ್ಜೆ ಹಾಕುವ ಮೂಲಕ ಪ್ರಾಣತ್ಯಾಗ ಮಾಡಿದ್ದಾರೆ ಎಂದರು.
ಇನ್ನು ಈ ವೇಳೆ ರಮೇಶ್ ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ್ದು, ಮಧು ಬಂಗಾರಪ್ಪ, ಬೇಳೂರು ಗೋಪಾಲಕೃಷ್ಣ, ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್ ಡಿಕೆಶಿಗೆಯೊಂದಿಗೆ ಉಪಸ್ಥಿತರಿದ್ದರು.