ಬೆಂಗಳೂರು, ಅ 29 (DaijiowrldNews/HR): ಅಭಿಮಾನಿಗಳ ಪಾಲಿನ ಅಪ್ಪು, ಸ್ಯಾಂಡಲ್ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷ ಆಗಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕನ್ನಡದಲ್ಲೇ ಟ್ವೀಟ್ ಮಾಡಿ ಸ್ಮರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಕೇಜ್ರಿವಾಲ್, ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ, ಡಾ.ಪುನೀತ್ ರಾಜ್ ಕುಮಾರ್ ಅವರ ಪುಣ್ಯತಿಥಿಯಂದು ನಾನು ಅವರನ್ನು ಬಹಳ ನೆನಪಿಸಿಕೊಳ್ಳುತ್ತೇನೆ ಎಂದಿದ್ದಾರೆ.
ಇನ್ನು ಪುನೀತ್ ಅವರ ಚಲನಚಿತ್ರಗಳು, ಹಾಡುಗಳು, ಮತ್ತು ಅವರ ಸಾಮಾಜಿಕ ಕಾರ್ಯಗಳು ಅವರು ನಮ್ಮನ್ನು ಎಂದಿಗೂ ಅಪ್ಪು ಬಿಟ್ಟು ಹೋಗಿಲ್ಲ ಎಂದು ನಮಗೆ ಅನಿಸುವಂತೆ ಮಾಡುತ್ತದೆ. ಅವರು ಯಾವಾಗಲೂ #ಕರುನಾಡು ಪವರ್ ಸ್ಟಾರ್ ಆಗಿರುತ್ತಾರೆ ಎಂದು ಹೇಳಿದ್ದಾರೆ.