ನವದೆಹಲಿ, ಅ 29 (DaijiowrldNews/HR): ಟಿಆರ್ಎಸ್ನ ಕೆಲವು ಶಾಸಕರಿಗೆ ಲಂಚ ನೀಡಿ ಅವರನ್ನು ಬಿಜೆಪಿಗೆ ಕರೆತರಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಂಧಿಸಬೇಕು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ಸರ್ಕಾರಗಳನ್ನು ಉರುಳಿಸಲು 'ಆಪರೇಷನ್ ಕಮಲ' ಎಂದು ಕರೆಯಲಾಗುವ ಕಾರ್ಯದಲ್ಲಿ ಅಮಿತ್ ಶಾ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ಬಿಜೆಪಿಯು ಈ ಹಿಂದೆ ದೆಹಲಿ, ಪಂಜಾಬ್ ಮತ್ತು ಇತರ ಎಂಟು ರಾಜ್ಯಗಳಲ್ಲಿ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನಿಸಿದ್ದು, ಈ ಬಾರಿ ತೆಲಂಗಾಣದ ಟಿಆರ್ಎಸ್ ಪಕ್ಷದ ಶಾಸಕರನ್ನು ಬಿಜೆಪಿಗೆ ಕರೆತರಲು ಯತ್ನಿಸಿದೆ ಎಂದು ಹೇಳಿದ್ದಾರೆ.