ಬಾಗಲಕೋಟೆ, ಅ 31 (DaijiworldNews/SM): ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮುಂದಿನ ಚುನಾವಣೆಗೆ ಟಿಕೆಟ್ ಸಿಗಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ ಹೊರಹಾಕಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಸ್ವಾಭಿಮಾನಿ ನಾಯಕ ಅಂತಾದರೆ, ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸುತ್ತಾರೆ" ಎಂದು ಅವರು ಕಿಡಿಖಾರಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ "ಬಿಜೆಪಿಯವರಿಗೆ ಸಿದ್ದರಾಮಯ್ಯನವರ ಭಯ ಇಲ್ಲ. ಬದಲಿಗೆ ನಮಗೆ ಬಹಳ ಖುಷಿ ಇದೆ. ಬಿಜೆಪಿಗೆ ಹೆಚ್ಚು ಮತ ಸಿಗುವುದೇ ಸಿದ್ದರಾಮಯ್ಯ ಮಾತಿನಿಂದ ಹಾಗೂ ಎಲ್ಲಿಯವರೆಗೂ ರಾಹುಲ್ ಗಾಂಧಿ ಇರುತ್ತಾರೋ ಅಲ್ಲಿಯವರೆಗೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುತ್ತದೆ. ಹಾಗೆ ಎಲ್ಲಿಯವರೆಗೂ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಇರುತ್ತಾರೋ ಅಲ್ಲಿಯವರೆಗೂ ಬಿಜೆಪಿ ಗೆಲ್ಲುತ್ತದೆ" ಎಂದು ವ್ಯಂಗ್ಯವಾಡಿದರು.