ತೆಲಂಗಾಣ, ನ 02(DaijiworldNews/MS): ಭಾರತ್ ಜೋಡೋ ಯಾತ್ರೆಯು ರಾಜಕೀಯ ಚಿತ್ರಣವನ್ನೇ ಬದಲಾಯಿಸುವ ಮೌನ ಕ್ರಾಂತಿಯನ್ನು ಹುಟ್ಟು ಹಾಕುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.
ಬುಧವಾರದ ಯಾತ್ರೆಯ ಆರಂಭಕ್ಕೂ ಮುನ್ನ, ತೆಲಂಗಾಣದ ರಾಜಧಾನಿ ಹೈದರಾಬಾದ್ನ ಬೋವೆನಪಲ್ಲಿಯಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸಾಗುತ್ತಿರುವವರೊಂದಿಗೆ ಖರ್ಗೆ ಸಂವಾದ ನಡೆಸಿದರು.
ಯತ್ರಿಗಳು ರಾಹುಲ್ ಗಾಂಧಿ ಅವರೊಂದಿಗೆ 3500 ಕಿಲೋಮೀಟರ್ ದೂರದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. 'ನಮ್ಮ ಪಕ್ಷದ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಉತ್ತಮ ಸ್ಫೂರ್ತಿಯ ಮೂಲವಾಗಿದ್ದಾರೆ. ಭಾರತ್ ಜೋಡೋ ಯಾತ್ರೆಯು ಮೂಕ ಕ್ರಾಂತಿಯನ್ನು ತರುತ್ತಿದ್ದು, ರಾಜಕೀಯ ಚಿತ್ರಣವನ್ನೇ ಬದಲಾಯಿಸಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ನಂತರ, ಯಾತ್ರೆಯು ಎಂಜಿಬಿ ಬಜಾಜ್ ಶೋರೂಮ್, ಬಾಲಾನಗರ ಮುಖ್ಯ ರಸ್ತೆ, ಹೈದರಾಬಾದ್ ನಗರದಿಂದ ಪುನರಾರಂಭವಾಯಿತು, ರಾಹುಲ್ ಗಾಂಧಿ ಜೊತೆಗೆ ಇತರ ಭಾರತ್ ಯಾತ್ರಿಗಳು ಯಾತ್ರೆಯ 56 ನೇ ದಿನದಂದು ತಮ್ಮ ನಡಿಗೆಯನ್ನು ಮುಂದುವರೆಸಿದರು.