ಬೆಂಗಳೂರು, ನ 02 (DaijiworldNews/HR): ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ವಿಚಾರಣೆ ಬಳಿಕ ಇಡಿಗೆ ಹೈಕೋರ್ಟ್ ಸಮನ್ಸ್ ನೀಡಿದ್ದು ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಇಡಿಗೆ ಸೂಚಿಸಿದೆ.
ಇನ್ನು ಡಿಕೆ ಶಿವಕುಮಾರ್ ಪಿಎಂಎಲ್ಎ ಸೆಕ್ಷನ್ 13 ರ ಸಾಂವಿಧಾನಿಕ ಸಿಂಧುತ್ವ ಬಗ್ಗೆ ಪ್ರಶ್ನೆ ಮಾಡಿದ್ದು, ನ್ಯಾಯಮೂರ್ತಿ ಮುಕ್ತಾ ಗುಪ್ತಾ ಮತ್ತು ಅನೀಶ್ ದಯಾಳ್ ಅವರ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಡಿಸೆಂಬರ್ 15 ಕ್ಕೆ ಮುಂದೂಡಿಕೆಯಾಗಿದೆ.