ಚಿತ್ರದುರ್ಗ, ನ 03 (DaijiworldNews/MS): ಮಠದ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ನ್ಯಾಯಾಂಗ ಬಂಧನ ಅವಧಿ ನವೆಂಬರ್ 8 ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಚಿತ್ರದುರ್ಗ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ನವೆಂಬರ್ 8 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ, ಪೊಲೀಸರು ಮುರುಘಾಶ್ರೀಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಮುರುಘಾ ಶ್ರೀ, ಎ2 ಮಹಿಳಾ ವಾರ್ಡನ್, ಎ4 ಆರೋಪಿ ಪರಮಶಿವಯ್ಯ ನ್ಯಾಯಾಂಗ ಬಂಧನದ ಅವಧಿ ನವೆಂಬರ್ 8 ರವರೆಗೆ ವಿಸ್ತರಣೆ ಮಾಡಿದೆ.