ನವದೆಹಲಿ, ನ 04 (DaijiworldNews/DB): ಭಾರತದ ಬ್ಯಾಂಕ್ಗಳಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಿಜಯ್ ಮಲ್ಯ ಪರ ವಕೀಲಿಕೆಯಿಂದ ತನ್ನನ್ನು ಕೈ ಬಿಡಬೇಕು ಎಂದು ಮಲ್ಯ ಪರ ನ್ಯಾಯವಾದಿ ಇ.ಸಿ. ಅಗರ್ವಾಲ್ ಸುಪ್ರೀಂ ಕೋರ್ಟ್ನಲ್ಲಿ ಮನವಿ ಮಾಡಿದ್ದಾರೆ.
ವಿಜಯ್ ಮಲ್ಯ ಕುರಿತ ವಂಚನೆ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ್ಯಾ. ಡಿ.ವೈ.ಚಂದ್ರಚೂಡ್ ಮತ್ತು ನ್ಯಾ. ಹಿಮಾ ಕೋಹ್ಲಿ ಅವರನ್ನು ಒಳಗೊಂಡ ನ್ಯಾಯಪೀಠದೆದುರು ಅವರು ಈ ಮನವಿ ಮಾಡಿದರು. ವಿಜಯ್ ಮಲ್ಯ ಬ್ರಿಟನ್ನಲ್ಲಿ ನೆಲೆಸಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಅಲ್ಲಿ ಅವರಿರುವ ಸ್ಥಳದ ಕುರಿತು ನನಗೆ ಮಾಹಿತಿ ಇಲ್ಲ. ಇಮೇಲ್ ವಿಳಾಸ ಬಿಟ್ಟರೆ ಬೇರೇನೂ ತಿಳಿದಿಲ್ಲ. ಅವರು ಸಂಪರ್ಕಕ್ಕೂ ಸಿಗುತ್ತಿಲ್ಲ. ಹೀಗಾಗಿ ಅವರ ಪರ ವಾದ ಮಂಡನೆ ಅಸಾಧ್ಯ. ತಮ್ಮನ್ನು ಈ ಪ್ರಕರಣದ ವಕೀಲಿಕೆಯಿಂದ ಕೈ ಬಿಡಬೇಕು ಎಂದು ಮನವಿ ಮಾಡಿದರು.
ಭಾರತೀಯ ಸ್ಟೇಟ್ ಬ್ಯಾಂಕ್ ನೇತೃತ್ವದ ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ 10 ಸಾವಿರ ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರೊಯಾಗಿರುವ ಆರೋಪ ಉದ್ಯಮಿ ವಿಜಯ ಮಲ್ಯ ಮೇಲಿದೆ.