ನವದೆಹಲಿ, ನ 04 (DaijiworldNews/HR): ದೆಹಲಿಯಲ್ಲಿ ವಾಯು ಮಾಲಿನ್ಯ ಉಂಟಾಗಿರುವ ಹಿನ್ನಲೆಯಲ್ಲಿಶೇ. 50 ರಷ್ಟು ಸರಕಾರಿ ಅಧಿಕಾರಿಗಳು ಮನೆಯಿಂದಲೇ ಕೆಲಸ ಮಾಡುತ್ತಾರೆ ಎಂದು ಪರಿಸರ ಸಚಿವ ಗೋಪಾಲ್ ರೈ ಶುಕ್ರವಾರ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಶೇ. 50 ರಷ್ಟು ದಿಲ್ಲಿ ಸರಕಾರಿ ಅಧಿಕಾರಿಗಳು ಮನೆಯಿಂದಲೇ ಕೆಲಸ ಮಾಡುತ್ತಿದ್ದು, ಖಾಸಗಿ ಕಚೇರಿಗಳಿಗೂ ಇದನ್ನು ಅನುಸರಿಸುವಂತೆ ಸಲಹೆ ನೀಡಿದ್ದಾರೆ.
ಇನ್ನು ಕಂದಾಯ ಆಯುಕ್ತರು ಮಾರುಕಟ್ಟೆಗಳು ಹಾಗೂ ಕಚೇರಿಗಳಿಗೆ ಸಮಯದ ಯೋಜನೆಯನ್ನು ಸಿದ್ಧಪಡಿಸುತ್ತಾರೆ. ದೆಹಲಿಯ ಹಾಟ್ಸ್ಪಾಟ್ಗಳಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ವಿಶೇಷ ಕಾರ್ಯಪಡೆಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.