ಬೆಂಗಳೂರು, ನ 04 (DaijiworldNews/HR): ಬಿಜೆಪಿಯವರು ಸರ್ಕಾರ ಇದೆ ಎಂದು ಚುನಾವಣಾ ಬಾಂಡ್ ಹೆಸರಲ್ಲಿ ಹಣ ಸಂಗ್ರಹಿಸಿದ್ದಾರೆ. ಆದರೆ ನಮಗೆ ಬಾಂಡ್ ಕೊಡುವವರಿಲ್ಲ. ಹಾಗಾಗಿ ನಾವು ಪಕ್ಷದ ಸಂಘಟನೆಗೆ ನಾವು ನಮ್ಮ ಕಾರ್ಯಕರ್ತರಿಂದ ಹಣ ಸಂಗ್ರಹಿಸುತ್ತಿದ್ದೇವೆ ಇದರಿಂದ ಬಿಜೆಪಿಯವರಿಗೇನು ನೋವು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಏನಾದರೂ ಟೀಕೆ ಮಾಡಲಿ. ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅರ್ಜಿ ಶುಲ್ಕ ಐದು ಸಾವಿರ ಹಾಗೂ ಅರ್ಜಿ ಸಲ್ಲಿಸುವಾಗ ಎರಡು ಲಕ್ಷ, ಒಂದು ಲಕ್ಷ ರೂ. ಡಿಡಿ ಪಡೆದರೆ ಬಿಜೆಪಿಯವಗ್ಯಾಕೆ ಕಷ್ಟ ಎಂದಿದ್ದಾರೆ.
ರೇಣುಕಾಚಾರ್ಯ ಅವರ ಸಹೋದರನ ಮಗನ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವನ್ನು ನಾನು ಮಾಧ್ಯಮಗಳಲ್ಲಿ ನೋಡಿದೆ. ಇಂತಹ ಘಟನೆ ಆಗಬಾರದಿತ್ತು, ಆಗಿಹೋಗಿದೆ. ಸರ್ಕಾರ ಈ ಬಗ್ಗೆ ತನಿಖೆ ಮಾಡಿ ನ್ಯಾಯ ಒದಗಿಸಲಿ ಎಂದು ಹೇಳಿದ್ದಾರೆ.