ಹೈದರಾಬಾದ್, ನ 05 (DaijiworldNews/HR): ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಹಾಸ್ಟೆಲ್ ಕೊಠಡಿಯೊಳಗೆ ಮತ್ತೋರ್ವ ವಿದ್ಯಾರ್ಥಿಗೆ ಥಳಿಸಿರುವ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿ ನಡೆದಿದೆ.
ವಿದ್ಯಾರ್ಥಿ ಕ್ಷಮೆ ಯಾಚಿಸುತ್ತಾ, ತನ್ನನ್ನು ಬಿಡುವಂತೆ ಬೇಡಿಕೊಳ್ಳುತ್ತಿದ್ದರೂ ಹಲ್ಲೆಕೋರರು ವಿದ್ಯಾರ್ಥಿಯನ್ನು ದೊಣ್ಣೆಗಳಿಂದ ಹೊಡೆದಿದ್ದು, ವಿದ್ಯಾರ್ಥಿಯ ಅಂಗಿ ಹರಿದಿದ್ದು, ಅಂಗಿಯನ್ನು ತೆಗೆಯುವಂತೆ ಒತ್ತಾಯಿಸಿರುವುದಾಗಿ ವರದಿಯಾಗಿದೆ.
ಹಲ್ಲೆಗೀಡಾದ ವಿದ್ಯಾರ್ಥಿ ಹಾಗೂ ಎಲ್ಲಾ ಆರೋಪಿಗಳು ಎಸ್ಆರ್ಕೆಆರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದಾರೆ ಎನ್ನಲಾಗಿದೆ.