ಹಿಮಾಚಲ ಪ್ರದೇಶ, ನ 05 (DaijiworldNews/DB): ಸುಳ್ಳು ಭರವಸೆ ನೀಡುವುದು ಕಾಂಗ್ರೆಸ್ನ ಬಹು ಹಳೆಯ ಕಾಲದ ತಂತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಮಂಡಿಯಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿದ ಅವರು, ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಕಾಂಗ್ರೆಸ್ ಹೇಳಿಕೊಂಡು ಬರುತ್ತಿರುವ ಸುಳ್ಳು ಇಡೀ ದೇಶಕ್ಕೇ ಗೊತ್ತಿದೆ. ಸುಳ್ಳಿನ ಭರವಸೆ ತಂತ್ರಕ್ಕೆ ಇದೇ ಸಾಕ್ಷಿ ಎಂದರು.
ಹಿಮಾಚಲ ಪ್ರದೇಶದಲ್ಲಿ ಅಭಿವೃದ್ದಿ ಮರೀಚಿಕೆಯಾಗಿದೆ. ಕಾಂಗ್ರೆಸ್ ಇಲ್ಲಿನ ಅಭಿವೃದ್ದಿಯನ್ನು ಬಯಸಿಯೇ ಇಲ್ಲ. ಆದರೆ ಬಿಜೆಪಿ ನೀಡಿದ ಭರವಸೆಗಳನ್ನು ಪೂರ್ಣಗೊಳಿಸಿದೆ. ಆ ಮೂಲಕ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ ಎಂದು ತಿಳಿಸಿದರು.