ಬೆಂಗಳೂರು, ನ. 06 (DaijiworldNews/SM) : ಕಾಂಗ್ರೆಸ್ ಪಕ್ಷದಲ್ಲಿ ಸದಸ್ಯನಾಗಿ ಬಳಿಕ ಹಂತ ಹಂತವಾಗಿ ಬೆಳೆದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
1969ರಲ್ಲಿ ಮೊದಲ ಬಾರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿದ್ದೆ. ಬಳಿಕ ಹಂತಹಂತವಾಗಿ ನಾನು ಕಾಂಗ್ರೆಸ್ ಪಕ್ಷದಲ್ಲಿ ಬೆಳೆದಿದ್ದೇನೆ. ಈಗ ಸೋನಿಯಾಗಾಂಧಿರವರು ಎಐಸಿಸಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ ಎಂದು ಸರ್ವೋದಯ ಸಮಾವೇಶದಲ್ಲಿ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನವೇರಿ ಮೊದಲ ಬಾರಿಗೆ ಖರ್ಗೆ ರಾಜ್ಯಕ್ಕೆ ಆಗಮಿಸಿದ್ದು, ಈ ಸಂಬಂಧ ಕೆಪಿಸಿಸಿ ಬೆಂಗಳೂರಿನ (Bengaluru) ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ಏರ್ಪಡಿಸಿತ್ತು.
ಸಮಾರಂಭದಲ್ಲಿ ಮಾತನಾಡಿದ ಅವರು ಈಗ ಶಾಸಕ, ಸಿಎಂ ಆಗಬೇಕೆಂದೇ ಪಕ್ಷಕ್ಕೆ ಸೇರುತ್ತಾರೆ. ಶಾಸಕ, ಸಿಎಂ ಆಗಬೇಕೆಂದು ಕಾಂಗ್ರೆಸ್ ಪಕ್ಷಕ್ಕೆ ಸೇರಬೇಡಿ. ಪಕ್ಷದ ಸಿದ್ಧಾಂತ ಒಪ್ಪಿ ಸೇರ್ಪಡೆಯಾಗಿ ಎಂದು ಖಡಕ್ ಸೂಚನೆ ನೀಡಿದರು.