ತಮಿಳುನಾಡು, ನ 07 (DaijiworldNews/HR): ತಮಿಳುನಾಡಿನ ತೆಂಕಶಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕರಡಿಯೊಂದು ದಾಳಿ ಮಾಡಿದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ವ್ಯಕ್ತಿಯೊಬ್ಬರು ತಮ್ಮ ಬೈಕ್ ನಲ್ಲಿ ಅರಣ್ಯ ಪ್ರದೇಶದಲ್ಲಿ ತೆರಳುತ್ತಿದ್ದ ಸಂದರ್ಭ ಕರಡಿ ದಾಳಿ ನಡೆಸಿದ್ದು, ಈ ವೇಳೆ ಆ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಇತರರು ರಕ್ಷಣೆಗೆ ಬಂದಿದ್ದಾರೆ, ಆದರೂ ಕರಡಿ ಓಡಲಿಲ್ಲ ಈ ವೇಳೆ ಅಲ್ಲಿ ನೆರೆದ ಜನರು ಕರಡಿಯತ್ತ ಕಲ್ಲು ತೂರಾಟ ನಡೆಸಿದ್ದಾರೆ ಆದರೂ ಜಗ್ಗದ ಕರಡಿ ವ್ಯಕ್ತಿಯ ಮೇಲೆ ಮನಬಂದಂತೆ ದಾಳಿ ನಡೆಸಿದ್ದು, ಬಳಿಕ ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದಾಗ ಭಯಗೊಂಡ ಕರಡಿ ಜನರ ಮೇಲೆ ಹಾರಿ ದಾಳಿ ಮಾಡಿದೆ ಎನ್ನಲಾಗಿದೆ.
ವಿಚಾರ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಗಂಭೀರ ಗಾಯಗೊಂಡ ಮೂವರನ್ನು ಕರಡಿ ಬಾಯಿಯಿಂದ ತಪ್ಪಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನು ಕರಡಿಯನ್ನು ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿ ಮಾಹಿತಿ ನೀಡಿದ್ದಾರೆ.