ಹೊಸನಗರ, ನ 07 (DaijiworldNews/HR): ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಪೊಲೀಸ್ ಠಾಣೆಯಲ್ಲೇ ನಡೆದಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತರನ್ನು ಬೇಳೂರು ಗ್ರಾಮದ ಮಕ್ಕಿಮನೆ ವಾಸಿಗಳಾದ ಕೃಷ್ಣಮೂರ್ತಿ (45), ರಾಮಚಂದ್ರ (50 ) ಎಂದು ಗುರುತಿಸಲಾಗಿದೆ.
ಹರೀಶ್ ನೀಡಿದ ದೂರಿನ ಅನ್ವಯ ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ಪಿಎಸ್ಐ ನಾಗರಾಜ್, ಹೆಚ್ ಸಿ ವೆಂಕಟೇಶ್ ಮತ್ತು ದೇವರಾಜ ನಾಯ್ಕ ವಿಚಾರಣೆ ನಡೆಸುತ್ತಿದ್ದು, ಈ ವೇಳೆ ತಮ್ಮ ಕೃಷ್ಣಮೂರ್ತಿ ಮತ್ತು ರಾಮಚಂದ್ರ ಸಮವಸ್ತ್ರ ಹರಿದು, ಅವಾಚ್ಯವಾಗಿ ಬೈದು, ಹಲ್ಲೆ ಮಾಡಿ, ಜೀವ ಬೆದರಿಕೆಯನ್ನು ಹಾಕಿದ್ದಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗನ್ನು ಬಂಧಿಸಲಾಗಿದೆ.