ನವದೆಹಲಿ, ನ 08 (DaijiworldNews/DB): ಹಿಂದೂ ಪದ ಅಶ್ಲೀಲ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹಿಂದೂ ಧರ್ಮ ಎಂದರೆ ಜೀವನ ವಿಧಾನ. ನಾಗರಿಕತೆಯ ವಾಸ್ತವವಾಗಿ ಅದು ತೋರಿಸಲ್ಪಡುತ್ತದೆ. ಕಾಂಗ್ರೆಸ್ ಪ್ರತಿ ಧರ್ಮ ಮತ್ತು ನಂಬಿಕೆಯನ್ನು ಗೌರವಿಸಲು ಭಾರತವನ್ನು ನಿರ್ಮಿಸಿದೆ ಎಂದು ಸುರ್ಜೇವಾಲಾ ಹೇಲಿದ್ದಾರೆ.
ಸತೀಶ್ ಜಾರಕಿಹೊಳಿ ಹೇಳಿಕೆ ದುರದೃಷ್ಟಕರವಾಗಿದೆ. ಅಂತಹ ಹೇಳಿಕೆ ಒಪ್ಪುವಂತದ್ದಲ್ಲ. ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ, .ಹಿಂದೂ ಎನ್ನವುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದವಾಗಿದೆ ಎಂದು ಹೇಳಿದ್ದರು.