ವಾರಣಾಸಿ, ನ 08 (DaijiworldNews/HR): ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಪತ್ತೆಯಾಗಿದ್ದು, ಇದಕ್ಕೆ ಪೂಜೆ ಸಲ್ಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿ ವಾರಣಾಸಿಯ ತ್ವರಿತ ನ್ಯಾಯಾಲಯ ತೀರ್ಪು ನೀಡಲಿದೆ.
ಸಿವಿಲ್ ನ್ಯಾಯಾಧೀಶ ಹಿರಿಯ ವಿಭಾಗ ತ್ವರಿತ ನ್ಯಾಯಾಲಯವು, ಸ್ವಯಂಭೂ ಜ್ಯೋತಿರ್ಲಿಂಗ ಭಗವಾನ್ ವಿಶ್ವೇಶ್ವರನ ಪ್ರಾರ್ಥನೆಗೆ ತಕ್ಷಣದ ಅನುಮತಿ, ಸಂಪೂರ್ಣ ಜ್ಞಾನವಾಪಿ ಸಂಕೀರ್ಣವನ್ನು ಹಿಂದೂಗಳಿಗೆ ಹಸ್ತಾಂತರಿಸುವುದು ಮತ್ತು ಜ್ಞಾನವಾಪಿ ಸಂಕೀರ್ಣದ ಆವರಣದೊಳಗೆ ಮುಸ್ಲಿಮರ ಪ್ರವೇಶ ನಿಷೇಧಿಸುವುದು ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳ ಮೇಲೆ ತೀರ್ಪು ನೀಡಲಿದೆ.
ಇನ್ನು ಅಕ್ಟೋಬರ್ನಲ್ಲಿ ನಡೆದ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ವಾರಣಾಸಿ ನ್ಯಾಯಾಲಯವು ಶಿವಲಿಂಗದ ವೈಜ್ಞಾನಿಕ ತನಿಖೆಗೆ ಅನುಮತಿ ನೀಡಲು ನಿರಾಕರಿಸಿತ್ತು.
ಸೆಪ್ಟೆಂಬರ್ 29 ರಂದು ವಿಚಾರಣೆಯಲ್ಲಿ ವಾರಣಾಸಿ ನ್ಯಾಯಾಲಯವು, ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್ಐ) ಸಮೀಕ್ಷೆಗೆ ಆದೇಶ ನೀಡುವುದು ಸರಿಯಲ್ಲ ಎಂದು ಹೇಳಿತ್ತು.