ಹುಬ್ಬಳ್ಳಿ, ನ 08 (DaijiworldNews/HR): ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸೋಮವಾರದಂದು ಜಾರಿ ನಿರ್ದೇಶನಾಲಯ (ಇಡಿ) ಕರೆದಿದ್ದ ವಿಚಾರಣೆಗೆ ಗೈರಾಗಿದ್ದರಿಂದ ನವೆಂಬರ್ 14ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಮತ್ತೆ ಸಮನ್ಸ್ ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ನವೆಂಬರ್ 14ಕ್ಕೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ಇಡಿ ಸಮನ್ಸ್ ನೀಡಿದ್ದು, ಅಂದು ಜವಾಹರ್ ಲಾಲ್ ನೆಹರು ಜಯಂತಿ ಇದೆ. ಹೀಗಿದ್ದರು ಕಾನೂನಿಗೆ ಗೌರವ ಕೊಡಬೇಕು. ಈ ಬಗ್ಗೆ ವಕೀಲರ ಜೊತೆ ಚರ್ಚೆ ನಡೆಸಿ ನಿರ್ಧರಿಸುತ್ತೇನೆ ಎಂದರು.
ಇನ್ನು ಡಿಕೆಶಿಯ ಸಹೋದರ ಸಂಸದ ಡಿ. ಕೆ. ಸುರೇಶ್ ಸೋಮವಾರ ಇಡಿ ವಿಚಾರಣೆಗೆ ಹಾಜರಾಗಿದ್ದು, ಆ ಬಗ್ಗೆ ಮಾಹಿತಿ ಪಡೆದು ಏನಾಯಿತು? ಎಂದು ತಿಳಿಸುವೆ ಎಂದರು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಅಕ್ರಮದ ಹಣ ವರ್ಗಾವಣೆ ವಿಚಾರವಾಗಿ ತನಿಖೆ ನಡೆಸುತ್ತಿದ್ದು, ಈ ಸಂಬಂಧ ಡಿ. ಕೆ. ಶಿವಕುಮಾರ್ ಮತ್ತವರ ಸಹೋದರ ಸಂಸದ ಡಿ. ಕೆ. ಸುರೇಶ್ ಅವರಿಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿತ್ತು.