ಚಿತ್ರದುರ್ಗ, ನ 09 (DaijiworldNews/DB): ಅಪ್ರಾಪ್ತ ಬಾಲಕಿಯರ ಮೇಲೆ ಮುರುಘಾ ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ನಂತರ ಹೆಣ್ಣು ಮಕ್ಕಳು ಸ್ವಾಮೀಜಿಗಳ ಬಳಿ ಹೋಗಲಾರದಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಸಾಣೇಹಳ್ಳಿಯಲ್ಲಿ ಮಾತನಾಡಿದ ಅವರು, ಇಂತಹ ಪರಿಸ್ಥಿತಿ ಉಂಟಾಗಿರುವುದು ದುಃಖಕರವಾಗಿದೆ. ಹೆಣ್ಣು ಮಕ್ಕಳು ಎಚ್ಚರವಾಗಿರಬೇಕು. ವೀರಶೈವ ಮಹಾಸಭಾವೂ ಸೂಕ್ತ ತೀರ್ಮಾನವನ್ನು ಕೈಗೊಳ್ಳುವ ನಿಟ್ಟಿನಲ್ಲಿ ಯೋಚಿಸುತ್ತದೆ ಎಂದರು.
ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗಳು ಬಂಧಿಸಲ್ಪಟ್ಟಿದ್ದಾರೆ. ಅಲ್ಲದೆ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿರುವುದು ತಿಳಿದಿದೆ. ಪ್ರಕರಣ ಸಂಬಂಧ ವೀರಶೈವ ಮಹಾಸಭಾವು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು. ಇನ್ನು ಅಲ್ಲಿ ನೆರೆದಿದ್ದ ಹಲವರು ಪರೋಕ್ಷವಾಗಿ ಮುರುಘಾಶ್ರೀ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.