ಕೇರಳ, ನ 10 (DaijiworldNews/HR): ಕೇರಳದ ಕೋಝಿಕ್ಕೋಡ್ನಲ್ಲಿ ತಲೆಕೂದಲು ಉದುರುವ ಕಾರಣಕ್ಕೆ ಮಾನಸಿಕವಾಗಿ ನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಜೊಂಡ ಯುವಕನನ್ನು ಕೋಝಿಕ್ಕೋಡ್ ಅಥೋಲಿ ಗ್ರಾಮದ ನಿವಾಸಿ ಪ್ರಶಾಂತ್ (29) ಎಂದು ಗುರುತಿಸಲಾಗಿದೆ.
ಯುವಕ 2014ರಿಂದ ಕೂದಲುದುರುವಿಕೆ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರೂ ಕೂಡಾ ಯಾವುದೇ ಪ್ರಯೋಜನವಾಗಿದಿದ್ದಾಗ, ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಜೊತೆಗೆ ಅನೇಕ ಹುಡುಗಿಯರು ಮದುವೆಯಾಗಲು ತಿರಸ್ಕರಿಸಿದ್ದಾರೆ ಎನ್ನಲಾಗಿದೆ..
ಇನ್ನು ಈ ಸಮಸ್ಯೆಯಿಂದಾಗಿ ಮನನೊಂದ ಪ್ರಶಾಂತ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821