ಬೆಂಗಳೂರು, ನ 11 (DaijiworldNews/MS): ವಿಶೇಷ ವಿಮಾನದ ಮೂಲಕ ಪ್ರಧಾನಮಂತ್ರಿ ಮೋದಿ ಕರ್ನಾಟಕದ ರಾಜ್ಯ ರಾಜಧಾನಿಗೆ ಎಂಟ್ರಿ ಕೊಟ್ಟಿದ್ದಾರೆ. ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಸೇರಿದಂತೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹೆಚ್. ಎ. ಎಲ್ ವಿಮಾನನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆ ಹ್ಲೋಟ್ ಅವರೊಂದಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಂಸದ ತೇಜಸ್ವಿ ಸೂರ್ಯ, ಶಾಸಕ ಅರವಿಂದ ಲಿಂಬಾವಳಿ ಹಾಜರಿದ್ದರು.
ವಿಮಾನ ನಿಲ್ದಾಣದಿಂದ ನೇರವಾಗಿ ವಿಧಾನಸೌಧದ ಬಳಿ ಇರುವ ಶಾಸಕರ ಭವನಕ್ಕೆ ತೆರಳಿ ಕನಕದಾಸ, ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ‘ವಂದೇ ಭಾರತ್ ಎಕ್ಸ್ಪ್ರೆಸ್’ ಮತ್ತು ‘ಭಾರತ ಗೌರವ ಕಾಶಿ ದರ್ಶನ’ ರೈಲುಗಳಿಗೆ ಹಸಿರು ನಿಶಾನೆ ಸೇರಿದಂತೆ ಪ್ರಧಾನಿ ಮೋದಿ 5 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ತೋರಿಸಲಿದ್ದಾರೆ
: ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಹೆಚ್ ಎಎಲ್ ನಿಂದ ವಿಧಾನಸೌಧ ಮಾರ್ಗದಲ್ಲಿ ಇಕ್ಕೆಲಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಎಲ್ಲೆಡೆ ಬಿಜೆಪಿ ಬಾವುಟ, ಸರ್ಕಾರದ ಕಾರ್ಯಕ್ರಮದ ಫ್ಲೆಕ್ಸ್ ಗಳು, ಪ್ರಧಾನಿಯವರ ಭಾವಚಿತ್ರವಿರುವ ಬ್ಯಾನರ್ ಗಳು, ಫ್ಲೆಕ್ಸ್ ಗಳು ರಾರಾಜಿಸುತ್ತಿವೆ.