ಬೆಂಗಳೂರು, ನ 11 (DaijiworldNews/DB): ಡಬಲ್ ಎಂಜಿನ್ ಸರ್ಕಾರದಿಂದಾಗಿ ರಾಜ್ಯ ಹಲವು ರೀತಿಯ ಪ್ರಯೋಜನ ಪಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ
ಬೆಂಗಳೂರು ನಗರ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ ಬಳಿಕ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ರಾಜ್ಯದ ಜನರು ಹಲವಾರ ರೀತಿಯ ಪ್ರಯೋಜನ ಪಡೆಯುತ್ತಿದ್ದಾರೆ. ಡಬಲ್ ಎಂಜಿನ್ ಸರ್ಕಾರದಿಂದ ರಾಜ್ಯ ಮತ್ತು ಜನತೆಗೆ ಲಾಭವೇ ಹೆಚ್ಚು ಎಂದರು.
ಜಲ ಜೀವನ್, ಮನೆಮನೆಗೆ ಗಂಗೆ, ಆಯುಷ್ಮಾನ್ ಭಾರತ್, ಪಿಎಂ ಕಿಸಾನ್ ಸೇರಿದಂತೆ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ನಡೆದಿದೆ. ಎರಡೂ ಕಡೆ ಬಿಜೆಪಿ ಸರ್ಕಾರ ಇರುವುದರಿಂದ ಇದು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಸಾಧ್ಯವಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.
ಇನ್ನು ಕರ್ನಾಟಕ ಸರ್ಕಾರದ ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನ್' ರೈಲು ಯಾತ್ರೆ ಉದ್ಘಾಟಿಸಿ, ಈ ಯಾತ್ರೆವು ದೇಶವನ್ನು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕವಾಗಿ ಜೋಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಬಲಿಷ್ಠ ಮತ್ತು ಏಕ ಭಾರತ ಶ್ರೇಷ್ಠ ಭಾರತ ನಿರ್ಮಾಣಕ್ಕೆ ಇದೊಂದು ದೊಡ್ಡ ಕೊಡುಗೆ ಎಂದು ಬಣ್ಣಿಸಿದರು.