ಶಿಮ್ಲಾ, ನ 12 (DaijiworldNews/DB): ಹಳೆಯ ಪಿಂಚಣಿ ಯೋಜನೆ ಜಾರಿಗೊಳ್ಳಲು ಮತ್ತು ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ಹಿಮಾಚಲಪ್ರದೇಶದ ಜನರು ಮತದಾನ ಮಾಡುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆಗೆ ಶನಿವಾರ ಮತದಾನ ಆರಂಭವಾಗುತ್ತಿದ್ದಂತೆ ಟ್ವೀಟ್ ಮಾಡಿದ ಅವರು, 68 ವಿಧಾನಸಭಾ ಕ್ಷೇತ್ರಗಳಲ್ಲಿ 55 ಲಕ್ಷಕ್ಕೂ ಹೆಚ್ಚು ಮತದಾರರು 412 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಇಂದು ಮತ ಹಾಕುತ್ತಿದ್ದಾರೆ. ಆದರೆ ಮತದಾರರು ಹಳೆ ಪಿಂಚಣಿ ಯೋಜನೆಗೆ ಮತ ಹಾಕುತ್ತಾರೆ. ಉದ್ಯೋಗಾವಕಾಶಗಳನ್ನು ಪಡೆಯಲು ಮತ ಹಾಕುತ್ತಾರೆ. ಒಟ್ಟಾರೆಯಾಗಿ ಹರ್ ಘರ್ ಲಕ್ಷ್ಮಿಗೆ ಹಿಮಾಚಲ ಪ್ರದೇಶದ ಜನರು ಮತ ಹಾಕುತ್ತಾರೆ ಎಂದಿದ್ದಾರೆ.
ಹಿಮಾಚಲದ ಅಭಿವೃದ್ದಿ ಮತ್ತು ಉತ್ತಮ ಭವಿಷ್ಯಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿ ಎಂದವರು ಇದೇ ವೇಳೆ ಮನವಿ ಮಾಡಿದ್ದಾರೆ.