ಗುವಾಹಾಟಿ, ನ 13 (DaijiworldNews/DB): ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಶಶಿ ತರೂರ್ ಅವರನ್ನು ಬೆಂಬಲಿಸಿದ 1 ಸಾವಿರ ಮಂದಿ ಕಾಂಗ್ರೆಸ್ ನಾಯಕರು ಬಿಜೆಪಿಗೆ ಬರಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಶರ್ಮಾ ಹೇಳಿಕೆ ಇದೀಗ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.
ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ದ ಎಐಸಿಸಿ ಅಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಶಶಿ ತರೂರ್ 1,072 ಮತ ಪಡೆದಿದ್ದರು. ಗಾಂಧಿ ಕುಟುಂಬದ ಆಯ್ಕೆ ಮಲ್ಲಿಕಾರ್ಜುನ ಖರ್ಗೆ ಅವರಾಗಿದ್ದರೂ ಅವರಿಗೆ ಮತ ನೀಡದೇ ಶಶಿ ತರೂರ್ಗೆ ಮತ ನೀಡಿದ್ದ ಇಷ್ಟೂ ಮಂದಿ ಶೀಘ್ರ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇವರೆಲ್ಲರೂ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿರುವ ನಾಯಕರಾಗಿದ್ದಾರೆ ಎಂದು ಬಿಸ್ವಾ ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಶಿ ತರೂರ್ ಅವರನ್ನು ಬೆಂಬಲಿಸಿದ ಕಾಂಗ್ರೆಸ್ ನಾಯಕರು ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರೆ ಎಂಬ ಗುಸುಗುಸು ಹರಿದಾಡಿತ್ತು. ಇದೀಗ ಆ ಸುದ್ದಿಗೆ ಪುಷ್ಠಿ ನೀಡುವಂತೆ ಬಿಸ್ವಾ ಅವರು ಹೇಳಿಕೆ ನೀಡಿದ್ದು, ರಾಜಕೀಯ ವಲಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಕೇವಲ ಕಣ್ಣೊರೆಸುವ ತಂತ್ರವಷ್ಟೇ. ಅಭ್ಯರ್ಥಿ ಮೊದಲೇ ಫಿಕ್ಸ್ ಆಗಿತ್ತಲ್ಲದೆ ಫಲಿತಾಂಶಕ್ಕೂ ಮುನ್ನವೇ ಖರ್ಗೆಯವರನ್ನು ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಎಂದೇ ಸಂಬೋಧಿಸಿದ್ದರು. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಿ ಪಕ್ಷದ ನಾಯಕರ ಕಣ್ಣೊರೆಸುವ ತಂತ್ರ ಮಾಡಿದ್ದಾರೆ. ಈ ಚನಾವಣೆ ಫಿಕ್ಸ್ ಆಗಿತ್ತು ಎಂದು ಇದೇ ವೇಳೆ ಹಿಮಂತ್ ಬಿಸ್ವಾ ರೋಪಿಸಿದ್ದಾರೆ.