ತೆಲಂಗಾಣ, ನ 13 (DaijiworldNews/DB): ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಖಾಲಿ ಕೈಗಳೊಂದಿಗೆ ಆಗಮಿಸಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ, ಟಿಆರ್ಎಸ್ ಎಂಎಲ್ಸಿ ಕೆ. ಕವಿತಾ ಟೀಕಿಸಿದ್ದಾರೆ.
ಜಗ್ತಿಯಾಲ್ ಜಿಲ್ಲೆಯ ರಾಯ್ಕಲ್ ನಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತೆಲಂಗಾಣಕ್ಕೆ ಪ್ರಧಾನಿ ಬರುವಾಗ ಏನೂ ತಾರದೆ ಬರಿಗೈಲಿ ಬಂದಿದ್ದಾರೆ. ಇಲ್ಲಿ ಬಂದು ಸುಮ್ಮನೆ ಹೇಳಿಕೆಗಳನ್ನು ನೀಡುತ್ತಾರೆಯಾದರೂ, ಆ ಹೇಳಿಕೆಗಳಿಗೆ ಯಾವ ಬೆಲೆಯೂ ಇಲ್ಲ. ನಮ್ಮ ರಾಜ್ಯಕ್ಕಾಗಿ ಅವರು ಏನೂ ಮಾಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ರಾಮಗುಂಡಂ ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಲಿಮಿಟೆಡ್ (ಆರ್ಎಫ್ಸಿಎಲ್) ಸ್ಥಾವರ ಮತ್ತು ಭದ್ರಾಚಲಂ ರಸ್ತೆ-ಸತ್ತುಪಲ್ಲಿ ರೈಲು ಮಾರ್ಗ ಸೇರಿದಂತೆ ಸುಮಾರು 10,000 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಶನಿವಾರ ದೇಶಕ್ಕೆ ಸಮರ್ಪಿಸಿದರು.