ಉದಯ್ಪುರ, ನ 13 (DaijiworldNews/HR): ಅಸರ್ವಾ-ಉದೈಪುರ ಎಕ್ಸ್ಪ್ರೆಸ್ ರೈಲು ಹಾದು ಹೋಗುವ ಗಂಟೆಗಳ ಮುನ್ನ ರೈಲು ಹಳಿಗಳಲ್ಲಿ ಸ್ಫೋಟ ಸಂಭವಿಸಿದ್ದು, ವಿಧ್ವಂಸಕ ಕೃತ್ಯ ಸೇರಿದಂತೆ ಎಲ್ಲಾ ಕೋನಗಳ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಹಳಿಗಳನ್ನು ಮರುಸ್ಥಾಪಿಸುವ ಕಾರ್ಯ ಆರಂಭವಾಗಿದೆ ಎಂದು ಉದಯಪುರದ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಶರ್ಮಾ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸ್ಥಳೀಯರು ಬೆಳಗ್ಗೆ ಸ್ಫೋಟದ ಬಗ್ಗೆ ನಮಗೆ ಮಾಹಿತಿ ನೀಡಿದ್ದು, ನಾವು ಟ್ರ್ಯಾಕ್ನಲ್ಲಿ ಕೆಲವು ಸ್ಫೋಟಕಗಳನ್ನು ಪತ್ತೆ ಹಚ್ಚಿದ್ದೇವೆ. ಕೃತ್ಯವೆಸಗಿದ ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೋಬರ್ 31 ರಂದು ಅಹಮದಾಬಾದಿನ ಅಸರ್ವಾ ರೈಲು ನಿಲ್ದಾಣದಿಂದ ಈ ಹಳಿಯಲ್ಲಿ ಅಸರ್ವಾ-ಉದೈಪುರ ಎಕ್ಸ್ಪ್ರೆಸ್ ರೈಲಿನ ಸಂಚಾರಕ್ಕೆ ಚಾಲನೆ ನೀಡಿದ್ದರು.