ನವದೆಹಲಿ, ನ 13 (DaijiworldNews/HR): ಹಲವು ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಸುಪ್ರೀಂ ಕೋರ್ಟ್ ವಕೀಲ ವಿಕಾಸ್ ಬನ್ಸೋಡೆ ಅವರು ಇಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಟಿ.ರವಿ, ವಿಕಾಸ್ ಬನ್ಸೋಡೆ ಅವರು ನಾಯಕ ಹಂಸರಾಜ್ ಭಾರದ್ವಾಜ್ ಸೇರಿದಂತೆ ಮಾಜಿ ರಾಜ್ಯಪಾಲರಿಗೆ ಕಾನೂನು ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಅವರು ಒಳಗಿನ ಅನೇಕ ವಿರೋಧ ಪಕ್ಷದ ನಾಯಕರನ್ನು ತಿಳಿದಿದ್ದಾರೆ ಮತ್ತು ಅದಕ್ಕಾಗಿಯೇ ಅವರಲ್ಲಿ ಕೆಲವರು ಬಿಜೆಪಿ ಸೇರುವ ನಿರ್ಧಾರದಿಂದ ನಿದ್ರೆ ಕಳೆದುಕೊಳ್ಳುತ್ತಿದ್ದಾರೆ ಎಂದರು.
ಇನ್ನು ಬಿಜೆಪಿ ಪಕ್ಷಕ್ಕೆ ಬನ್ಸೋಡೆ ಸೇರ್ಪಡೆಗೊಂಡಿರುವುದು ದಕ್ಷಿಣ ಭಾರತದಲ್ಲಿ ಪಕ್ಷವನ್ನು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.