ನವದೆಹಲಿ, ನ 14 (DaijiworldNews/HR): ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಸಂವಹನ ಉಸ್ತುವಾರಿ ಮತ್ತು ದೆಹಲಿ ಉಪಮುಖ್ಯಮಂತ್ರಿ ಮನಿಸ್ ಸಿಸೋಡಿಯಾ ಅವರ ಆಪ್ತ ಸಹಾಯಕ ವಿಜಯ್ ನಾಯರ್ ಮತ್ತು ಹೈದರಾಬಾದ್ ಮೂಲದ ಉದ್ಯಮಿ ಅಭಿಷೇಕ್ ಬೋಯಪಲ್ಲಿ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ಸಂವಹನ ಉಸ್ತುವಾರಿ ವಿಜಯ್ ನಾಯರ್ ಮತ್ತು ಅಭಿಷೇಕ್ ಬೋಯಿನ್ಪಲ್ಲಿ ಅವರು ಸಲ್ಲಿಸಿದ ಜಾಮೀನು ಅರ್ಜಿಗಳ ಮೇಲಿನ ತೀರ್ಪನ್ನು ರೂಸ್ ಅವೆನ್ಯೂ ನ್ಯಾಯಾಲಯವು ನವೆಂಬರ್ 9 ರಂದು ಕಾಯ್ದಿರಿಸಿದ್ದು, ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರು ಜಾಮೀನು ವಾದಗಳು ಮುಕ್ತಾಯಗೊಂಡ ನಂತರ ಆದೇಶವನ್ನು ಕಾಯ್ದಿರಿಸಿದ್ದು, ಜಾಮೀನು ಅರ್ಜಿಗಳ ಆದೇಶವನ್ನು ಇಂದು ನೀಡಲಿದೆ.
ಇನ್ನು 2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ವಿಜಯ್ ನಾಯರ್ ಅಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ.