ಹುಬ್ಬಳ್ಳಿ, ನ. 16 (DaijiworldNews/SM) : ಹುಬ್ಬಳ್ಳಿಯ ಒಂದು ಪ್ರದೇಶದಲ್ಲಿ ಮತಾಂತರದ ಆರೋಪಕ್ಕೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಮತ್ತು ವ್ಯಕ್ತಿಯೊಬ್ಬರು ಕೆಲವು ಧಾರ್ಮಿಕ ಮುಖಂಡರು ಸೇರಿ 15 ಜನರ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿದ ಶಿಕ್ಕಲಗಾರ ಸಮುದಾಯದವರು ಹಾಗೂ ಹಿಂದೂಪರ ಸಂಘಟನೆಗಳ ಸದಸ್ಯರು ಮಂಗಳವಾರ ರಾತ್ರಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಮತಾಂತರದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಹಳೇ ಹುಬ್ಬಳ್ಳಿಯಲ್ಲಿ ಶಿಕ್ಕಲಗಾರ ಸಮುದಾಯವನ್ನು ಟಾರ್ಗೆಟ್ ಮಾಡಿ ಮತಾಂತರದ ಕೆಲಸ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.