ಚಿಕ್ಕಮಗಳೂರು, ನ 17 (DaijiworldNews/MS): ಕಾಂಗ್ರೆಸ್ ನಾಯಕಿ, ಮಾಜಿ ಎಂ ಎಲ್ ಸಿ ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ ಅವರ ನಿವಾಸಕ್ಕೆ ಬೆಳ್ಳಂಬೆಳಿಗ್ಗೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳ ತಂಡ ದಾಳಿ ಮಾಡಿದೆ.
ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿರುವ ನಿವಾಸ, ಕಚೇರಿ ಬೇಲೂರು ರಸ್ತೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದ್ದು ಅಧಿಕಾರಿಗಳು ಕಾಗದಪತ್ರ, ಇತ್ಯಾದಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಗಾಯತ್ರಿ ಕುಟಂಬದವರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪೊಲೀಸರು ಜೊತೆಗೆ ಇದ್ದಾರೆ
ಮದುವೆ ದಿಬ್ಬಣದ ಪೋಸ್ಟ್ ಹಾಕಿಕೊಂಡು ಬಂದ ಅಧಿಕಾರಿಗಳು: ಮದುವೆ ದಿಬ್ಬಣದ ಸೋಗಿನಲ್ಲಿ ಬಂದ ಅಧಿಕಾರಿಗಳು ಅನುಮಾನ ಬಾರದಂತೆ ಕಾರಿನ ಮುಂಭಾಗದಲ್ಲಿ ಅಭಿನವ್ ವೆಡ್ಸ್ ದೀಪಿಕಾ ಎಂದು ಬೋರ್ಡ್ ಹಾಕಲಾಗಿದೆ.