ಬೆಂಗಳೂರು, ನ 17 (DaijiworldNews/HR): ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ 24X7 ಸಹಾಯವಾಣಿ ತೆರೆಯುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಸಂಬಂಧಿಸಿದ ತಾಯಿ-ಮಗು ಸಾವಿನ ಪ್ರಕರಣ ಮತ್ತೆ ಮರುಕಳಿಸದಂತೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ 24X7 ಸಹಾಯವಾಣಿ ತೆರೆಯಲಾಗುವುದು. ಆರೋಗ್ಯ ಸಮಸ್ಯೆಯಿಂದ ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.
ಇನ್ನು ಈ ಸಹಾಯವಾಣಿಗೆ ಸಾಮಾಜಿಕ ಭದ್ರತೆ ಇರುವಂತಹ 4 ಸಿಬ್ಬಂದಿಯನ್ನು ನೇಮಿಸಿಕೊಳ್ಳಬೇಕು. ಈ ಸಹಾಯವಾಣಿ ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಹಗಲು ಪಾಳಿಯಲ್ಲಿ ಇಬ್ಬರು ಮತ್ತು ರಾತ್ರಿ ಪಾಳಿಯಲ್ಲಿ ಇಬ್ಬರು ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.