ನವೆದಹಲಿ, ನ 17 (DaijiworldNews/HR): ದೆಹಲಿಯ ಶ್ರದ್ಧಾ ವಾಕರ್ ಭೀಕರ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅನ್ನು, ಕೋರ್ಟ್ ಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರುಪಡಿಸೋದಕ್ಕೆ ದೆಹಲಿ ಪೊಲೀಸರ ಅರ್ಜಿಗೆ ಕೋರ್ಟ್ ಸಮ್ಮತಿ ನೀಡಿದೆ.
ಈ ಪ್ರಕರಣದ ಭದ್ರತೆ ಮತ್ತು ಸೂಕ್ಷ್ಮತೆಯಿಂದಾಗಿ ಆರೋಪಿ ಅಫ್ತಾಬ್ ಪೂನಾವಾಲಾ ಅವನನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಯಿತು.
ಇನ್ನು ಅಫ್ತಾಬ್ ಪೂನಾವಾಲಾನನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಇಂದು 4 ಗಂಟೆಗೆ ಪೊಲೀಸರು ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.