ಬೆಂಗಳೂರು, ನ. 17 (DaijiworldNews/SM): ಡಿಸೆಂಬರ್ 19 ರಿಂದ 29 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಈ ಮಾಹಿತಿ ನೀಡಿದ ಸಚಿವ ಸುಧಾಕರ್, ಈ ಬಾರಿ ಬೆಳಗಾವಿಯಲ್ಲೇ ಹತ್ತು ದಿನ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಮಧ್ಯೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಉತ್ತಮ ರೀತಿಯಲ್ಲಿ ಅಧಿವೇಶನ ನಡೆಸಲಾಗುವುದು ಎಂದು ವಿಧಾಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಧಾರವಾಡದಲ್ಲಿ ಹೇಳಿದ್ದಾರೆ.