ಮೈಸೂರು, ನ 18 (DaijiworldNews/MS): ಇತ್ತೀಚೆಗೆ ನಾನು ಬಿಜೆಪಿ ಶಾಸಕರು ಕಣ್ಣೀರು ಹಾಕಿರುವುದನ್ನು ನೋಡಿದ್ದೇನೆ , ಶಾಸಕರು ಅಲ್ಲದೇ ಸಂಸದರು ಕಣ್ಣೀರು ಹಾಕುವುದನ್ನು ಗಮನಿಸಿದ್ದೇನೆ. ಇವರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
ಜೆಡಿಎಸ್ ಪಂಚರತ್ನ ಯಾತ್ರೆಗೂ ಮುನ್ನ ಮೈಸೂರಿನಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ವಿಶೇಷ ಪೂಜೆ ಸಲ್ಲಿಸಿ, ಪಕ್ಷದ ಪ್ರಚಾರ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ನಾಯಕರೇ ಕಣ್ಣಿರು ಹಾಕಿದರೆ ಮತದಾರರು ಏನು ಮಾಡಬೇಕು ಎಂದು ಕೇಳಿದರು. ಇದೇ ವೇಳೆ ಗುಂಬಜ್ ತಂಗುದಾಣವಿವಾದಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಅವರು, ‘ಮಸೀದಿಯನ್ನಾದರೂ ಮಾಡಿ, ಗೋಪುರವನ್ನಾದರೂ ಮಾಡಿ. ಜನರಿಗೆ ನೆರಳು ಕೊಡಿ. ಕೆಡವುವ ಕೆಲಸ ಮಾಡಬೇಡಿ. ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಬೇಡಿ’ ಎಂದರು
ಶಾಸಕರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು? ಬಿಜೆಪಿ ಶಾಸಕರು ಕಣ್ಣೀರು ಹಾಕಿರುವುದನ್ನು ನಾನು ನೋಡಿದ್ದೇನೆ. ಸಂಸದರು ಕಣ್ಣೀರು ಹಾಕಿಸಿರುವುದನ್ನು ಗಮನಿಸಿದ್ದೇನೆ. ಇವರಿಗೆ ಮತ ನೀಡಿದ ಜನರ ಕತೆ ಏನು? ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ಪಂಚರತ್ನ ಯಾತ್ರೆಗೂ ಮುನ್ನ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ವಿಶೇಷ ಪೂಜೆ ಸಲ್ಲಿಸಿ, ಪಕ್ಷದ ಪ್ರಚಾರ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಮೈಸೂರಿನ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜು ಬಸ್ ನಿಲ್ದಾಣ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಅವರು, ‘ಮಸೀದಿಯನ್ನಾದರೂ ಮಾಡಿ, ಗೋಪುರವನ್ನಾದರೂ ಮಾಡಿ. ಜನರಿಗೆ ನೆರಳು ಕೊಡಿ. ಕೆಡಹುವ ಕೆಲಸ ಮಾಡಬೇಡಿ. ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಬೇಡಿ’ ಎಂದರು.