ಹೈದರಾಬಾದ್, ನ 19 (DaijiworldNews/DB): ತೆಲಂಗಾಣ ರಾಷ್ಟ್ರೀಯ ಸಮಿತಿ ಶಾಸಕರ ಖರೀದಿ ಯತ್ನ ಆರೋಪದ ಮೇಲೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ತೆಲಂಗಾಣ ಪೊಲೀಸರು ಸಮನ್ಸ್ ನೀಡಿದ್ದಾರೆ.
ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರ ತೆಲಂಗಾಣ ರಾಷ್ಟ್ರೀಯ ಸಮಿತಿ ಶಾಸಕರನ್ನು ಖರೀದಿಸಲು ಪ್ರಯತ್ನಿಸಲಾಗಿದೆ ಎಂಬ ಆರೋಪ ಮೇಲೆ ಬಿ.ಎಲ್. ಸಂತೋಷ್ ಅವರ ವಿರುದ್ದ ಪ್ರಕರಣ ದಾಖಲಾಗಿದ್ದು, ನವೆಂಬರ್ 21ಕ್ಕೆ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ನೀಡಲಾಗಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಬಂಧಿಸಲಾಗುವುದು ಎಂದು ಸೂಚಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಪ್ರಕರಣದ ವಿಚಾರಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿದ ಎನ್ನಲ್ಲೇ ಬಿ.ಎಲ್. ಸಂತೋಷ್ ಅವರಿಗೆ ಸಮನ್ಸ್ ನೀಡಲಾಗಿದೆ. ಆದರೆ ನ್ಯಾಯಾಧೀಶರೊಬ್ಬರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂಬುದಾಗಿ ಹೈಕೋರ್ಟ್ ಆದೇಶಿಸಿದೆ.
ಹೈದರಾಬಾದ್ನ ಫಾರ್ಮ್ಹೌಸ್ವೊಂದರಲ್ಲಿ ಟಿಆರ್ಎಸ್ ಶಾಸಕರಿಗೆ 100 ಕೋಟಿ ರೂ. ಆಮಿಷ ನೀಡಿ ಬಿಜೆಪಿ ತನ್ನತ್ತ ಸೆಳೆದುಕೊಳ್ಳಲು ಯತ್ನಿಸುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇತ್ತೀಚೆಗೆ ಮೂವರನ್ನು ಪೊಲೀಸರು ಬಂಧಿಸಿದ್ದರು.