ಬೆಂಗಳೂರು, ನ 19 (DaijiworldNews/MS): ಮತದಾರರ ಪಟ್ಟಿ ಪರಿಷ್ಕರಣೆ ಹಗರಣದ ಪ್ರಕರಣ ಸಂಬಂಧ ಚಿಲುಮೆ ಕಚೇರಿ ಮೇಲೆ ದಾಳಿ ನಡೆಸಿರುವ ಪೊಲೀಸರಿಗೆ ಪ್ರಭಾವಿ ಸಚಿವರೊಬ್ಬರಿಗೆ ಸೇರಿದ ಚೆಕ್ ಹಾಗೂ ಸಚಿವರ ಲೆಟರ್ ಹೆಡ್, ಎನ್ವಲಪ್ ಕವರ್ ಇತರೆ ಕೆಲವು ಮಹತ್ವದ ದಾಖಲೆ ಲಭಿಸಿವೆ ಎನ್ನಲಾಗಿದೆ.
ಆದರೆ, ಪೊಲೀಸರು ವಶಪಡಿಸಿಕೊಂಡ ಆ ಚೆಕ್ ಯಾವ ಸಚಿವರದ್ದು ಎನ್ನುವುದು ಕುತೂಹಲ ಮೂಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸುವ ಸೂಚನೆಯಿದೆ. ಕಚೇರಿಯಲ್ಲಿದ್ದ ಸಿಸಿಟಿವಿ ಪೋಟೇಜ್ ನ್ನು ಕೂಡ ಪೊಲೀಸರು ವಶಕ್ಕೆ ಮಾಡಿದ್ದಾರೆ.
ಇನ್ನೊಂದೆಡೆ, ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ತಲೆಮರೆಸಿಕೊಂಡಿದ್ದು ಚಿಲುಮೆ ಸಂಸ್ಥೆ ನಿರ್ದೇಶಕಿ ಆಗಿರುವ ರವಿಕುಮಾರ್ ಪತ್ನಿ ಐಶ್ವರ್ಯ ಹಾಗೂ ಟಿ.ಬೇಗೂರು ತೋಟದ ಮನೆಗೆ ದಾಖಲಾತಿ ಸಾಗಿಸಿದ್ದ ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.