ಜಮ್ಮು ಮತ್ತು ಕಾಶ್ಮೀರ, ನ 19 (DaijiworldNews/HR): ಗಡಿ ನಿಯಂತ್ರಣ ರೇಖೆಯಿಂದ ಒಳನುಸುಳುವಿಕೆ ಯತ್ನವನ್ನು ಸೇನಾ ಪಡೆಗಳು ವಿಫಲಗೊಳಿಸಿ ಓರ್ವ ಉಗ್ರನನ್ನು ಹತ್ಯೆ ಮಾಡಿರುವ ಘಟನೆ ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ನಲ್ಲಿ ನಡೆದಿದೆ.
ಹತ್ಯೆಗೀಡಾದ ಉಗ್ರರ ದೇಹವನ್ನು ಯುದ್ಧೋಚಿತ ಮಳಿಗೆಗಳೊಂದಿಗೆ ವಶಪಡಿಸಿಕೊಂಡಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಉತ್ತರ ಕಾಶ್ಮೀರದ ಮಚ್ಚಿಲ್ ಸೆಕ್ಟರ್ನಲ್ಲಿ ಸಂಭವಿಸಿದ ಭಾರೀ ಹಿಮಪಾತಕ್ಕೆ ಮೂವರು ಸೇನಾ ಯೋಧರು ಶುಕ್ರವಾರ ಸಾವನ್ನಪ್ಪಿದ್ದಾರೆ.