ಶಿರಸಿ, ನ 19 (DaijiworldNews/HR): ತಾನು ಮೂಲ ಬಿಜೆಪಿಗನೇ ಆಗಿರುವುದರಿಂದ ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿಗ ಎಂಬ ಯಾವುದೇ ಸಮಸ್ಯೆ ಎನಗಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾನೂ ಮೂಲ ಬಿಜೆಪಿಗನೇ. ಎಲ್ಲೂ ಏನೂ ಸಮಸ್ಯೆ ಇಲ್ಲ. ಎಲ್ಲರೂ ಒಂದಾಗಿ ಬರಲಿರುವ ಚುನಾವಣೆ ಎದುರಿಸುತ್ತೇವೆ ಎಂದರು.
ಇನ್ನು ಯಲ್ಲಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಮೂಲ ಬಿಜೆಪಿಗರು, ವಲಸಿಗರ ನಡುವೆ ಗೊಂದಲ ಇದೆ. ಹೇಗೆ ನಿವಾರಿಸುತ್ತೀರಿ ಗೊಂದಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಾನು ಮೂಲ ಬಿಜೆಪಿಗನೇ ಆಗಿರುವುದರಿಂದ ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿಗ ಎಂಬ ಯಾವುದೇ ಸಮಸ್ಯೆ ತನಗಿಲ್ಲ ಎಂದು ಪುನರುಚ್ಚರಿಸಿದ್ದಾರೆ.