ಪಣಜಿ, ನ 19 (DaijiworldNews/HR): ಡಾ. ಬಿ.ಆರ್.ಅಂಬೇಡ್ಕರ್ ಅವರು ಭಾರತದ ಮೊದಲ ಸ್ತ್ರೀವಾದಿ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.
ಗೋವಾ ಪರಂಪರೆಯ ಉತ್ಸವದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ತರೂರ್, 1920, 30, 40ರಲ್ಲೇ ಅಂಬೇಡ್ಕರ್ ಮಹಿಳಾವಾದಿ ಭಾಷಣಗಳನ್ನು ಮಾಡಿದ್ದು, ಇಂದು ಪ್ರಗತಿಪರ ಚಿಂತನೆಗಳು ಎನ್ನಲಾಗುತ್ತಿರುವ ವಿಚಾರಗಳನ್ನು ಅವರು ಅಂದೇ ಪ್ರಸ್ತುತ ಪಡಿಸಿದ್ದರು ಎಂದರು.
ಇನ್ನು ಅಂಬೇಡ್ಕರ್ ಅವರು ಮಹಿಳೆಯರಿಗೆ ಬಲವಂತದ ವಿವಾಹವಾಗದಂತೆ ಒತ್ತಾಯಿಸಿದ್ದರು. ಸಣ್ಣ ವಯಸ್ಸಿಗೆ ಮದುವೆಯಾಗದಂತೆ, ಸಣ್ಣ ವಯಸ್ಸಿನಲ್ಲೇ ಮಗು ಮಾಡಿಕೊಳ್ಳದಂತೆ ಒತ್ತಾಯಿಸಿದ್ದರು ಎಂದು ಹೇಳಿದ್ದಾರೆ.