ನವದೆಹಲಿ, ನ 20 (DaijiworldNews/HR): ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲನನ್ನು ನವದೆಹಲಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಸೋಮವಾರದಂದು ಮಂಪರು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿ ಅಫ್ತಾಬ್ನನ್ನು ದೆಹಲಿ ನ್ಯಾಯಾಲಯವು ಮಂಗಳವಾರದವರೆಗೆ ಪೊಲೀಸರ ವಶಕ್ಕೆ ನೀಡಿದ್ದು, ಇದರ ಒಳಗೆ ಮಂಪರು ಪರೀಕ್ಷೆ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.
ಶ್ರದ್ದಾಳ ದೇಹದ ಮೂರು ಎಲುಬುಗಳನ್ನು ಗುರುಗ್ರಾಮದಿಂದ ಪೊಲೀಸರು ವಶಕ್ಕೆ ಪಡೆದಿದ್ದು, ಜತೆಗೆ ಮೃತದೇಹವನ್ನು 35 ತುಂಡುಗಳನ್ನಾಗಿಸಲು ಆರೋಪಿ ಬಳಸಿದ್ದಾನೆ ಎನ್ನಲಾದ ಚಾಕು ಮತ್ತು ಇತರೆ ಹರಿತವಾದ ವಸ್ತುಗಳನ್ನು ಅಫ್ತಾಬ್ ಪ್ಲಾಟ್ನಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇನ್ನು ಹರಿತವಾದ ವಸ್ತು ಹಾಗೂ ಬಟ್ಟೆಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.