ನವದೆಹಲಿ, ನ 21 (DaijiworldNews/HR): ದೆಹಲಿಯ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹದ ಉಳಿದ ಭಾಗಗಳ ಪತ್ತೆಗಾಗಿ ಪೊಲೀಸರು ಮೆಹೌಲಿ ಸಮೀಪದ ಮೈದಾನ್ ಗಹಿ ಕೆರೆಯಲ್ಲಿ ಹುಡುಕಾಟ ನಡೆಸಿದ್ದು, ಇದಕ್ಕಾಗಿ ಕೆರೆಯ ನೀರನ್ನೇ ಬರಿದು ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಗುರುಗ್ರಾಮದಲ್ಲಿ ತಲೆಬುರುಡೆಯ ಕೆಲವು ಭಾಗಗಳು ಪತ್ತೆಯಾಗಿದ್ದು, ಇವು ಶ್ರದ್ಧಾಳದೇ ಎಂಬುದನ್ನು ಪತ್ತೆಹಚ್ಚಲು ಅವುಗಳನ್ನು ಪೊಲೀಸರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದು, ಮೆಹೌಲಿಯಲ್ಲಿರುವ ಆರೋಪಿ ಅಫ್ತಾಬ್ನ ಮನೆಯಿಂದ ಎರಡು ಪ್ಲಾಸ್ಟಿಕ್ ಬ್ಯಾಗ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇನ್ನು ನವದೆಹಲಿಯ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಇಂದು ಆರೋಪಿ ಅಫ್ತಾಬ್ನ ಮಂಪರು ಪರೀಕ್ಷೆ ನಡೆಯಲಿದ್ದು, ದಿಲ್ಲಿ ನ್ಯಾಯಾಲಯವು ಮಂಗಳವಾರದವರೆಗೆ ಆರೋಪಿ ಅಫ್ತಾಬ್ನನ್ನು ಪೊಲೀಸರ ವಶಕ್ಕೆ ನೀಡಿದೆ.