ಪುಣೆ, ನ 21 (DaijiworldNews/HR): ಹಲವು ವಾಹನಗಳಿಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ 30 ಮಂದಿ ಗಾಯಗೊಂಡು 48 ವಾಹನಗಳು ಜಖಂಗೊಂಡಿರುವ ಘಟನೆ ನಗರದ ಹೊರವಲಯದ ನವಲೆ ಸೇತುವೆ ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಟ್ಯಾಂಕರ್ ನ ಬ್ರೇಕ್ ವೈಫಲ್ಯದಿಂದಾಗಿ ಅದು ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದ್ದು, ಟ್ಯಾಂಕರ್ ನಿಂದ ರಸ್ತೆಗೆ ತೈಲ ಸೋರಿಕೆಯಾಗಿ ಹಲವು ವಾಹನಗಳು ಅಪಘಾತಕ್ಕೀಡಾದವು ಎನ್ನಲಾಗಿದೆ.
ಇನು ಘಟನೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸುಮಾರು ಎರಡು ಕಿಲೋಮೀಟರ್ ದೂರದವರೆಗೆ ವಾಹನಗಳು ಸಾಲುಗಟ್ಟಿದ್ದವು ಎಂದು ಹೇಳಲಾಗಿದೆ.