ನವದೆಹಲಿ, ನ 22 (DaijiworldNews/DB): ದೆಹಲಿ ಮಹಾನಗರ ಪಾಲಿಕೆಗೆ ಸ್ಪರ್ಧಿಸಲು ಟಿಕೆಟ್ ಸಿಗದ್ದಕ್ಕೆ ಬಂಡಾಯವೆದ್ದಿರುವ ಆಕಾಂಕ್ಷಿಗಳಿಗೆ ಬಿಜೆಪಿ ಬಿಸಿ ಮುಟ್ಟಿಸಿದೆ. 11 ಮಂದಿ ಬಂಡಾಯ ಅಭ್ಯರ್ಥಿಗಳನ್ನು ಆರು ವರ್ಷ ಕಾಲ ಪಕ್ಷದಿಂ ಅಮಾನತು ಮಾಡಲಾಗಿದೆ.
ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆ ಸನಿಹವಾಗುತ್ತಿದ್ದಂತೆ ಬಿಜೆಪಿಯಲ್ಲಿ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಈಗಾಗಲೇ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಡಲಾಗಿದ್ದು, ಇದರಿಂದ ಅಸಮಾಧಾನಗೊಂಡ ಕೆಲವರು ತಮಗೆ ಟಿಕೆಟ್ ನೀಡದ್ದಕ್ಕೆ ಪಕ್ಷದ ವಿರುದ್ದ ಬಂಡಾಯವೆದ್ದು, ಪಕ್ಷದ ಅಭ್ಯರ್ಥಿಗಳ ವಿರುದ್ದ ಸ್ಪರ್ಧಿಸಲು ಸಿದ್ದತೆ ನಡೆಸುತ್ತಿದ್ದರು. ಆದರೆ ಬಿಜೆಪಿ ಬಂಡಾಯ ಅಭ್ಯರ್ಥಿಗಳಿಗೆ ಬಿಸಿ ಮುಟ್ಟಿಸಿದೆ. 11 ಮಂದಿ ಬಂಡಾಯ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಿ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಆದೇಶ ಹೊರಡಿಸಿದ್ದಾರೆ.
ಹಿರಿಯ ನಾಯಕ ಗಜೇಂದ್ರ ದಾರಲ್ ಅವರಿಗೆ ಟಿಕೆಟ್ ಲಭಿಸಿದ್ದರೂ ಕೊನೆ ಕ್ಷಣದಲ್ಲಿ ಅವರನ್ನು ಕೈಬಿಟ್ಟು ಅರುಣ್ ದಾರಲ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಹೀಗಾಗಿ ದಾರಲ್ ಕೂಡಾ ಬಂಡಾಯವೆದ್ದಿದ್ದರು. ಇದೀಗ ಅವರೂ ಅಮಾನತುಗೊಂಡಿದ್ದಾರೆ.
ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್ಗಳಿಗೆ ಡಿಸೆಂಬರ್ 4ರಂದು ಚುನಾವಣೆ ನಡೆಯಲಿದ್ದು, ಡಿ.7ರಂದು ಮತ ಎಣಿಕೆಯ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.