ಚಿತ್ರದುರ್ಗ, ನ 22 (DaijiworldNews/HR): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಈ ವೇಳೆ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾದ ಘಟನೆ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದಿದ್ದು, ಕೆಲವು ಪೊಲೀಸರು ಗಾಯಗೊಂಡಿದ್ದು ಪಾದಾಚಾರಿಗಳಿಬ್ಬರೂ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮುಂದಿನಿಂದ ಅಡ್ಡ ಬಂದ ಬೈಕ್ ತಪ್ಪಿಸಲು ಬ್ರೇಕ್ ಹಾಕಿದ ಕಾರಣದಿಂದ ಸಿಇಎನ್ ಸಿಪಿಐ ರಮಾಕಾಂತ್ ಇದ್ದ ಪೊಲೀಸ್ ವಾಹನ ಪಲ್ಟಿಯಾಗಿದ್ದು, ಓರ್ವ ಮಹಿಳಾ ಪೇದೆ, ಮೂವರು ಕಾನ್ಸ್ಟೇಬಲ್, ಸಿಪಿಐ ರಮಾಕಾಂತ್, ಪಿಎಸ್ಐ ಸೇರಿ ಹಲವರಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಪಲ್ಲಿಯಾಗುವ ವೇಳೆ ಎಸ್ಕಾರ್ಟ್ ವಾಹನವು ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಹೊಡೆದಿದ್ದು, ಮಗ ಮನೋಜ್ ಗಂಭೀರವಾಗಿ ಗಾಯ ಗೊಂಡಿದ್ದಾರೆ ಎನ್ನಲಾಗಿದೆ.
ವಾಹನ ಪಲ್ಟಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.