ನವದೆಹಲಿ, ನ 22 (DaijiworldNews/HR): ಸಿಟ್ಟಿನ ಭರದಲ್ಲಿ ಅಪರಾಧ ಎಸಗಿದೆ ಎಂದು ದೆಹಲಿಯ ಶ್ರದ್ಧಾ ವಾಲಕರ್ ಅವರನ್ನು ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿರುವ ಆಫ್ತಾಬ್ ಅಮೀನ್ ಪೂನಾವಾಲಾ ಮಂಗಳವಾರ ದೆಹಲಿ ನ್ಯಾಯಾಲಯಲ್ಲಿ ಹೇಳಿರುವುದಾಗಿ ವರದಿಯಾಗಿದೆ.
ಆಫ್ತಾಬ್ ಪೊಲೀಸ್ ಕಸ್ಟಡಿಯ ಐದು ದಿನಗಳ ಅವಧಿಯು ಮಂಗಳವಾರ ಮುಗಿದಿದ್ದು, ಆತನನ್ನು ಇಲ್ಲಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಅವಿರಲ್ ಶುಕ್ಲಾ ಅವರ ಎದುರು ಹಾಜರುಪಡಿಸಲಾಗಿತ್ತು.
ಇನ್ನು ಆಫ್ತಾಬ್ನ ಕಸ್ಟಡಿ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿದ ನ್ಯಾಯಾಧೀಶರು, ಸುಳ್ಳುಪತ್ತೆ ಪರೀಕ್ಷೆ ನಡೆಸಲು ಪೊಲೀಸರಿಗೆ ಅನುಮತಿ ನೀಡಿದರು.
ಸಿಟ್ಟಿನ ಭರದಲ್ಲಿ ಅಪರಾಧ ಎಸಗಿದ್ದಾಗಿ ಆಫ್ತಾಬ್ ಕೋರ್ಟ್ಗೆ ಹೇಳಿದ್ದು, ಪೊಲೀಸರಿಗೆ ಸಹಕಾರ ನೀಡುತ್ತಿರುವುದಾಗಿಯೂ ತಿಳಿಸಿದ್ದಾನೆ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ.