ಚಿತ್ರದುರ್ಗ, ನ 22 (DaijiworldNews/SM): ಜನಸಂಕಲ್ಪ ಯಾತ್ರೆ ಬಿಜೆಪಿಯ ವಿಜಯ ಸಂಕಲ್ಪವಾಗಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಜನ ಸಂಕಲ್ಪ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾನು ನೀರಾವರಿ ಸಚಿವನಾದ ಮೇಲೆ ಧರಣಿ ಸ್ಥಳಕ್ಕೆ ಆಗಮಿಸಿದ್ದೆ. ಆಗ ಸುಮಾರು ಹತ್ತು ಸಾವಿರ ರೈತರು ಸೇರಿದ್ದರು. ಒಂದು ಉದ್ವೇಗದ ವಾತಾವರಣ ನಿರ್ಮಾಣವಾಗಿತ್ತು. ಅಂದಿನ ರೈತರ ಕಷ್ಟದ ದಿನಗಳನ್ನು ಅರಿತು ಅಂದು ಸಿಎಂ ಜೊತೆ ಚರ್ಚಿಸಿ ಭದ್ರಾ ಮೇಲ್ದಂಡೆ ಯೋಜನೆಯಿಂದ ವಾಣಿ ವಿಲಾಸ ಜಲಾಶಯಕ್ಕೆ ನೀರು ಹರಿಸುವ ಕ್ರಮ ಕೈಗೊಳ್ಳಲಾಯಿತು. ಹದಿನೈದು ದಿನದೊಳಗೆ ಆದೇಶ ಮಾಡಲಾಯಿತು ಎಂದು ಹೇಳಿದರು.
ಋಣ ತೀರಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡಿಲ್ಲ ಇನ್ನು ರಾಜ್ಯದಲ್ಲಿ ಜಲಸಂಪನ್ಮೂಲ ಇದೆ. ಜನರ ಪರ ಕೆಲಸ ಮಾಡಬೇಕು. ಮೈಸೂರು ಮಹಾರಾಜರು ಮಾಡಿದ ಕಾರ್ಯವನ್ನು ಕಾಂಗ್ರೆಸ್ ಪಕ್ಷ ಮಾಡಲಿಲ್ಲ. ಈ ಭಾಗದ ಕಾಂಗ್ರೆಸ್ ನಾಯಕರು, ವಾಣಿ ವಿಲಾಸ ಜಲಾಶಯಕ್ಕೆ ನೀರು ಕೊಡಲು ಆಗಿಲಿಲ್ಲ. ಮೈಸೂರು ಮಹಾರಾಜರ ಋಣ ತೀರಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ಸಂಪೂರ್ಣವಾಗಿ ಕಿತ್ತೊಗೆಯಬೇಕು ಎಂದು ಹೇಳಿದರು.