ನವದೆಹಲಿ, ನ 25 (DaijiworldNews/HR): ಆಮ್ ಆದ್ಮಿ ಪಕ್ಷದ ಮುಖಂಡ ಸಂದೀಪ್ ಭಾರದ್ವಾಜ್(55) ಪಶ್ಚಿಮ ದೆಹಲಿಯ ರಾಜೌರಿ ಗಾರ್ಡನ್ನಲ್ಲಿರುವ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳಕ್ಕೆ ಅಪರಾಧ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಭಾರದ್ವಾಜ್ ಮಾರ್ಬಲ್ಸ್ ಮಾಲೀಕನಾಗಿದ್ದಾರೆ. ಪತ್ನಿಯಿಂದ ವಿಚ್ಛೇದನ ಪಡೆದಿರುವ ಭಾರದ್ವಾಜ್ ತಮ್ಮಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನೊಂದಿಗೆ ವಾಸಿಸುತ್ತಿದ್ದರು.
ಇನ್ನು ಸಂದೀಪ್ ಅವರ ಸಾವಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಂತಾಪ ಸೂಚಿಸಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821