ಮುಂಬೈ, ನ 25 (DaijiworldNews/HR): ಮಹಾರಾಷ್ಟ್ರಕ್ಕೆ ಸೇರಿರುವ ಪ್ರದೇಶದ ಒಂದಿಂಚು ಭೂಮಿಯನ್ನುಯಾವುದೇ ಕಾರಣಕ್ಕೂ ನೆರೆರಾಜ್ಯಕ್ಕೆ ಹೋಗಲು ಬಿಡುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ಬೆಳಗಾವಿ ಗಡಿ ಕುರಿತಂತೆ ಮಹಾರಾಷ್ಟ್ರ, ಕರ್ನಾಟಕ ನಡುವೆ ಜಟಾಪಟಿ ನಡೆಯುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿದ ಶಿಂಧೆ, ನಾವು ಗಡಿಭಾಗದ ಮರಾಠಿ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದು, ಮಹಾರಾಷ್ಟ್ರದ ಒಂದಿಂಚು ಜಾಗವನ್ನು ಎಲ್ಲಿಗೂ ಹೋಗಲು ಬಿಡುವುದಿಲ್ಲ ಎಂದರು.
ಇನ್ನು ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿರುದ್ಧ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಾಗ್ದಾಳಿ ನಡೆಸಿದ್ದರು.